ಅಂಬೇಡ್ಕರ್ಗೆ ಅವಮಾನ: ಪರಣ್ಣ ಖಂಡನೆ

ಗಂಗಾವತಿ.
ನಗರದ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಅವಮಾನ ಮಾಡಿರುವ ಘಟನೆಯನ್ನು ಮಾಜಿ ಶಾಸಕ ಪರಣ್ಣ ಮುನವಳ್ಳಿ ಖಂಡಿಸಿದ್ದು, ತಕ್ಷಣ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿರುವ ಅವರು ಸೋಮವಾರ ಘಟನೆಯ ವಿಷಯ ತಿಳಿದು ಮಾಧ್ಯಮ ದಲಿತ ಸಂಘಟನೆ ಮುಖಂಡರೊಂದಿಗೆ ಮಾತನಾಡಿ, ನಂತರ ಮಾಧ್ಯಮಗಳ ಮೂಲಕ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ನಗರದಲ್ಲಿ ಇರುವ ಅಂಬೇಡ್ಕರ್ ಮೂರ್ತಿಗೆ ಅವಮಾನ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ಈ ರೀತಿ ಆಗದಂತೆ ಅಧಿಕಾರಿಗಳು ನಿಗಾವಹಿಸಬೇಕಿತ್ತು. ವೃತ್ತದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳನ್ನು ಯಾಕೆ ತೆಗೆದಿದ್ದಾರೆ. ಸಿಸಿ ಕ್ಯಾಮರಾ ಇದ್ದರೆ ಕಿಡಿಗೇಡಿಗಳನ್ನು ತಕ್ಷಣ ಪತ್ತೆ ಹಚ್ಚಬಹುದಿತ್ತು. ಈಗಲಾದರೂ ಡಿವೈಎಸ್ಪಿ ಮತ್ತು ತಹಶೀಲ್ದಾರರು, ನಗರಸಭೆ ಪೌರಾಯುಕ್ತರು ತಕ್ಷಣ ನಗರದ ಎಲ್ಲಾ ವೃತ್ತಗಳು ಮತ್ತು ಪ್ರಮುಖ ರಸ್ತೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಅಂಬೇಡ್ಕರ್ ಮೂರ್ತಿಗೆ ಅವಮಾನ ಮಾಡಿರುವುದು ಎಲ್ಲರಿಗೂ ನೊವ್ವಾಗಿದೆ. ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಮುಂದೆ ಈ ರೀತಿ ಘಟನೆ ನಡೆಯದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಒತ್ತಾಯಿಸಿದ್ದಾರೆ.