ಜೆಡಿಎಸ್ ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷರಾಗಿ. ಗಂಗಾವತಿಯ ರಾಜು ನಾಯಕ ನೇಮಕ

ಗಂಗಾವತಿ.
ಜಾತ್ಯಾತೀತ ಜನತಾದಳ ಪಕ್ಷದ ಯುವ ಘಟಕಕ್ಕೆ ರಾಜ್ಯ ಕಾರ್ಯಾಧ್ಯಕ್ಷರಾಗಿ ಗಂಗಾವತಿಯ ಯುವ ಮುಖಂಡ ಹಾಗೂ ಕಂಪ್ಪಿ ವಿಧಾನಸಭೆ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಾಜು ನಾಯಕ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ವರಿಷ್ಠರಾಗಿರುವ ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ನಿರ್ದೇಶನದಂತೆ ಕಳೆದ ದಿನ ಬೆಂಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜು ನಾಯಕ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ಜವಬ್ದಾರಿ ಹಂಚಿಕೆ ಮಾಡಿದ್ದಾರೆ. ತಮಗೆ ನೀಡಿರುವ ಜವಬ್ದಾರಿಗೆ ಸಂತೋಷ ವ್ಯಕ್ತಪಡಿಸಿರುವ ರಾಜು ನಾಯಕ ಅವರು ಹೆಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ನಾಯಕರಿಗೆ ಅಭಿನಂದಿಸುತ್ತೇನೆ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ರಾಜ್ಯಮಟ್ಟದ ಜವಬ್ದಾರಿ ನೀಡುವಂತಹ ಕೆಲಸ ಜೆಡಿಎಸ್ ಪಕ್ಷದಲ್ಲಿ ಮಾತ್ರ. ನಮ್ಮ ಪಕ್ಷದ ಎಲ್ಲಾ ನಾಯಕರು ಕಾರ್ಯಕರ್ತರನ್ನು ಸಕ್ರೀಯಗೊಳಿಸಿ ರಾಜಕೀಯದಲ್ಲಿ ಬೆಳೆಯಲು ಅವಕಾಶ ಕಲ್ಪಿಸುತ್ತಾರೆ. ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಎನ್ಡಿಎ ಭಾಗವಾಗಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಲಿದೆ. ರಾಜ್ಯದಲ್ಲಿ ೨೮ ಕ್ಷೇತ್ರಗಳಲ್ಲೂ ಎನ್ಡಿಎ ಮೈತ್ರಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ. ಮತ್ತು ಕೇಂದ್ರದಲ್ಲಿ ಅಬ್ ಕಿ ಬಾರ ಚಾರ್ ಸೌ ಸರಕಾರ ಎಂಬ ಘೊಷಣೆಯಂತೆ ಮತ್ತೊಮ್ಮೆ ಎನ್ಡಿಎ ಅಧಿಕಾರಕ್ಕೆ ಬರಲಿದೆ. ರಾಜ್ಯದ ಯುವ ಸಮುದಾಯ ಜೆಡಿಎಸ್ ಪಕ್ಷದೊಂದಿಗೆ ಕೈ ಜೋಡಿಸಿದರೆ ರಾಜಕಾರಣದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ಯುವಕರು ಜೆಡಿಎಸ್ ಪಕ್ಷದೊಂದಿಗೆ ಗುರುತಿಸಿಕೊಂಡು ರಾಜಕಾರಣದಲ್ಲಿ ಸಕ್ರೀಯರಾಗಬೇಕು ಎಂದು ಕರೆ ನೀಡಿದ ರಾಜು ನಾಯಕ ಅವರು ಪಕ್ಷದ ರಾಜ್ಯ ನಾಯಕರ ನಿರ್ದೇಶನದಂತೆ ರಾಜ್ಯಾದ್ಯಂತ ಜೆಡಿಎಸ್ ಯುವ ಘಟಕವನ್ನು ಬಲಿಷ್ಟಗೊಳಿಸಲು ಸಜ್ಜಾಗುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ. ಶಾಸಕರಾದ ಕರೆಮ್ಮ, ನೇಮರಾಜ್ ನಾಯಕ್. ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಮುಖಂಡ ಸಿ.ವಿ.ಚಂದ್ರಶೇಖರ, ಮಾಂತಯ್ಯಮಠ. ಮತ್ತಿತರು ಇದ್ದರು.